Select Language:

ಪ್ರಾಸ್ತಾವಿಕೆ

ಪ್ರಾಕೃತಿಕ ಸೌಂದರ್ಯದ ಅದ್ಭುತ ರಮಣೀಯ ದೃಶ್ಯದಿಂದ ಕೂಡಿದ ಸುಬ್ರಹ್ಮಣ್ಯ ಗ್ರಾಮವು ಸುಳ್ಯ ತಾಲೂಕು ದಕ್ಷಿಣ ಕನ್ನಡ ಜಿಲ್ಲೆಯಲ್ಲಿದೆ. ಇಲ್ಲಿಯ ಪಾವಿತ್ರತೆಯು ಹಾಗೂ ದೇವ ಸಾನ್ನಿದ್ಯವು ಅತಿ ವಿರಳ ಸ್ಥಳಗಳಲ್ಲಿ ಮಾತ್ರ ಕಾಣಬಹುದಾಗಿದ್ದು,, ಹೆಮ್ಮೆ ಪಡುವಂತಾಗಿದೆ.

ಇಲ್ಲಿಯ ದೇವಸ್ಥಾನವು ಊರಿನ ಮಧ್ಯದಲ್ಲಿದ್ದು ನದಿ - ಕಾಡು - ಪರ್ವತಗಳಿಂದ ಅಮೃತವಾಗಿದ್ದು ಪ್ರಕೃತಿಯ ಅಪ್ರತಿಮ ಸೌಂದರ್ಯಕ್ಕೆ ಭಾಶ್ಯದಂತಿದೆ. ಶ್ರೀ ಸುಬ್ರಹ್ಮಣ್ಯ ದೇವರು ಇಲ್ಲಿಯ ದೇವಳದ ಪ್ರಧಾನ ದೇವತೆ .

ಮುಖ್ಯ ದ್ವಾರವು ಪೂರ್ವಾಭಿಮುಖವಾಗಿದೆ . ಭಕ್ತಾದಿಗಳು ಮುಖ್ಯ ಗೋಪುರವಿರುವ ಪಶ್ಚಿಮ ಬಾಗಿಲಿನಿಂದ ಪ್ರವೇಶಿಸಿ ಒಳಸುತ್ತನ್ನು ಪೂರ್ವ ಬಾಗಿಲಿನಿಂದ ಮುಂದುವರಿಸುತ್ತಾರೆ . ಗರ್ಭಗುಡಿಯ ಮಧ್ಯಭಾಗದಲ್ಲಿ ಶ್ರೀ ದೇವರ ಮೂರ್ತಿಯಿದೆ . ಅದರ ಮೇಲಿನ ಹಂತದಲ್ಲಿ ಶ್ರೀ ಸುಬ್ರಹ್ಮಣ್ಯ ಮೂರ್ತಿ ಮತ್ತೆ ವಾಸುಕಿ ಹಾಗೂ ಕೆಳ ಹಂತದಲ್ಲಿ ಆದಿಶೇಷನ ಮೂರ್ತಿಗಳಿವೆ . ಭಕ್ತಾದಿಗಳು ಒಳ ಸುತ್ತನ್ನು ಪ್ರವೇಶಿಸುವಾಗ ತಮ್ಮ ಶರ್ಟು , ಬನಿಯಾನುಗಳನ್ನು ತೆಗೆಯಬೇಕಾಗುವುದು .

  ದೇವಳವು ಕರ್ನಾಟಕ ಸರಕಾರದ ಮುಜರಾಯಿ ( ಧಾರ್ಮಿಕ ದತ್ತಿ ) ಇಲಾಖೆಗೆ ಒಳಪಟ್ಟಿದೆ . ಇದು ನಾಗಗಳ ವಾಸಸ್ಥಾನವಾಗಿದೆ . ಇಲ್ಲಿ ಶ್ರೀ ಸುಬ್ರಹ್ಮಣ್ಯನಿಗೆ ಸಲ್ಲಿಸಿದ ಪೂಜೆಯು ಸರ್ಪರಾಜನಾದ ವಾಸುಕಿಗೆ ಸಲ್ಲುವುದು . ಹಾಗಾಗಿ ಸ್ಥಳವು ಎಲ್ಲಾ ತರಹದ ನಾಗದೋಷಗಳ ಪರಿಹಾರ ಸ್ಥಳವಾಗಿ ನಂಬಲಾಗಿದೆ . ದೇಶದ ಮೂಲೆ - ಮೂಲೆಗಳಿಂದ ಸರ್ಪಸಂಸ್ಕಾರ , ನಾಗಪ್ರತಿಷ್ಠೆ , ಆಶ್ಲೇಷಬಲಿ ಹಾಗೂ ಇತರ ಪೂಜಾದಿಗಳನ್ನು ಸಲ್ಲಿಸಲು ಭಕ್ತಾದಿಗಳು ಬರುತಿರುತ್ತಾರೆ .

 
ಸುದ್ದಿಯಲ್ಲಿ
News
ಇದು

Read More
ವಿಶೇಷ ದಿನಗಳು
There are no news items to be displayed










Read More

( c ) 2010. All Rights Reserved. designed by InvenTest.